ಸೂರ್ಯ ತನ್ನ ಪಥ ಬದಲಿಸುವ ಸಮಯವನ್ನೇ ಹಬ್ಬವಾಗಿ ಆಚರಿಸುವ ಕಾರಣ ಸೋಮವಾರ ಜನ ಪವಿತ್ರ ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡಿ, ನದಿಯಲ್ಲಿ ಸ್ನಾನ ಮಾಡಿದರು. ಜಿಲ್ಲೆಯ ಪವಿತ್ರ ಸ್ಥಳಗಳಾದ ಗವಿಸಿದ್ದೇಶ್ವರ ಮಠ, ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನ, ಆನೆಗೊಂದಿಯ ಅಂಜನಾದ್ರಿ ಬೆಟ್ಟ, ಮಾರ್ಕಂಡೇಶ್ವರ ಹೀಗೆ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆಯುವುದು ನಡೆಯಿತು.