ಯಲಬುರ್ಗಾ ತಾಲ್ಲೂಕು ಕುಕನೂರಿನ ಮಹಾಮಾಯಿ ದೇವಸ್ಥಾನದಲ್ಲಿ ಬ್ರಾಹ್ಮಣ ಯುವ ಪರಿಷತ್ತಿನ ಮಹಿಳಾ ಸಂಘ, ವೆಬ್ಸೈಟ್ ಉದ್ಘಾಟನೆ ವೇಳೆ ಸಚಿವ ಅನಂತಕುಮಾರ್ ಹೆಗಡೆ ಅವರು 'ಜಾತ್ಯತೀತತೆ ಕುರಿತು ಸಂವಿಧಾನ ಹೇಳಿದೆ, ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದರೆ, ಸಂವಿಧಾನ ಕೂಡಾ ಕಾಲಕ್ಕೆ ತಕ್ಕಂತೆ ಎಷ್ಟೋ ಬಾರಿ ಬದಲಾಗಿದೆ. ಮುಂದಿನ ದಿನಗಳಲ್ಲೂ ಕೂಡ ಬದಲಾಗುತ್ತದೆ. ಆ ಸಂವಿಧಾನವನ್ನು ಬದಲಾಯಿಸುವುದಕ್ಕಾಗಿಯೇ ನಾವು ಇರುವುದು, ಬಂದಿರುವುದು' ಎಂದು ಹೇಳಿದ್ದರು.