ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾವೇನು ದನಗಳಾ?: ಅನಂತಕುಮಾರ ಹೆಗಡೆ

Last Updated 17 ಜನವರಿ 2018, 7:05 IST
ಅಕ್ಷರ ಗಾತ್ರ

ಬೆಳಗಾವಿ: ‘ಜೀವನದಲ್ಲಿ ಏನಾಗಬೇಕೆಂದು ಕೇಳಿದರೆ ಕೆಲ ಬುದ್ಧಿಜೀವಿಗಳು ಮೊದಲು ಮಾನವನಾಗಬೇಕು ಎಂದು ಹೇಳುತ್ತಾರೆ. ಹಾಗಾದರೆ ಇಷ್ಟು ದಿನ ನಾವೇನು ದನಗಳಾಗಿದ್ದೇವಾ? ಮನುಷ್ಯರಾಗಿ ಹುಟ್ಟಿದ ಮೇಲೆ ನಾವು ಮನುಷ್ಯರಲ್ಲವೇ?’ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹರಿಹಾಯ್ದರು.

ಸ್ಕಿಲ್‌ ಇಂಡಿಯಾ ಅಡಿ ಇಲ್ಲಿ ಆಯೋಜಿಸಿರುವ ‘ಸ್ಕಿಲ್‌ ಆನ್‌ ವ್ಹೀಲ್ಸ್‌’  ಕೌಶಲ ಅಭಿವೃದ್ಧಿ ಕುರಿತು ರಾಷ್ಟ್ರೀಯ ಯುವ ಸಮ್ಮೇಳನಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಮನುಷ್ಯರಾಗಿ ಹುಟ್ಟಿದ ಮೇಲೆ ಮತ್ತೆ ಮನುಷ್ಯರಾಗುವುದರಲ್ಲಿ ವಿಶೇಷ ಏನಿದೆ? ಅವರಿಗೆ ದೃಷ್ಟಿದೋಷವಿರಬೇಕು. ಸಂಸ್ಕೃತದಲ್ಲಿ ಶ್ಲೋಕವೊಂದಿದೆ. ಮನುಷ್ಯರಾಗಿ ಹುಟ್ಟಿದವರು ದೇವರಾಗಲು ಪ್ರಯತ್ನಿಸಬೇಕು. ನಾವೆಲ್ಲ ದೇವರಾಗಲು ಪ್ರಯತ್ನಿಸಬೇಕು’ ಎಂದರು.

‘ಸರ್ಕಾರದಿಂದ ಸೈಟ್‌ ಪಡೆದುಕೊಳ್ಳಲು ಕೆಲವರು ಸಾಹಿತಿ ಎನ್ನುವ ಪಟ್ಟ ಕಟ್ಟಿಕೊಂಡಿದ್ದಾರೆ. ಬರೆದಿದ್ದೇ ಸಾಹಿತ್ಯ, ಗೀಚಿದ್ದೇ ಕವಿತೆ ಎನ್ನುವಂತಾಗಿದೆ. ಅದಕ್ಕೆ ಯಾವ ಅರ್ಥವೂ ಇರುವುದಿಲ್ಲ. ತುದಿ ಇಲ್ಲ, ಬುಡವೂ ಇಲ್ಲ’ ಎಂದು ಟೀಕಿಸಿದರು.

‘ಮುಂದಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಹೆಚ್ಚಾಗಲಿದೆ. ಬಲಿಷ್ಠರು ಮಾತ್ರ ಬದುಕುವಂತಹ ಸ್ಥಿತಿ ಬರಲಿದೆ. ದುರ್ಬಲರನ್ನು ದೇವರಲ್ಲ, ಅವರ ತಾಯಿ ಕೂಡ ರಕ್ಷಿಸಲಾರಳು. ಅದಕ್ಕಾಗಿ ಯುವಕರು ಬಲಿಷ್ಠರಾಗಲು ಪ್ರಯತ್ನಿಸಬೇಕು. ನಾವು ಅಂದುಕೊಂಡಿದ್ದನ್ನು ಸಾಧಿಸುವ ಛಲ ಹೊಂದಬೇಕು. ಹುಟ್ಟಿದ್ದು ಆಳಲಿಕ್ಕೋಸ್ಕರ ಎನ್ನುವ ಧ್ಯೇಯದೊಂದಿಗೆ ಯುವಕರು ಮುನ್ನುಗ್ಗಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT