ಮಧ್ಯಾಹ್ನ 2ಕ್ಕೆ ಬಾಣಂತಮ್ಮನ ಮಗ ಕುಂಟ ಕುಮಾರಲಿಂಗೇಶ್ವರ ಉತ್ಸವ ಮೂರ್ತಿಯನ್ನು ಅಡ್ಡ ಪಲ್ಲಕ್ಕಿಯಲ್ಲಿರಿಸಿ ಕುಂಟುತ್ತಲೇ ಮೆರವಣಿಗೆಯಲ್ಲಿ ಜಾತ್ರಾ ಮಂಟಪಕ್ಕೆ ತಂದು ಇರಿಸಿ ಪೂಜಿಸಲಾಯಿತು. ಭಕ್ತರು ಪೂಜೆ ಸಲ್ಲಿಸಿದ ಬಳಿಕ ಮರಳಿ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ತರುವ ಮೂಲಕ ಜಾತ್ರೋತ್ಸವಕ್ಕೆ ತೆರೆ ಎಳೆಯಲಾಯಿತು. ಮೈದಾನದಲ್ಲಿ ಅಲಂಕಾರಿಕ ವಸ್ತುಗಳು, ಮಕ್ಕಳ ಆಟಿಕೆಗಳು, ಹೋಟೆಲ್, ತಿಂಡಿ– ತಿನಿಸುಗಳ ಅಂಗಡಿಗಳು ಮಹಿಳೆಯರು ಹಾಗೂ ಮಕ್ಕಳನ್ನು ಆಕರ್ಷಿಸಿದವು.