ಗ್ರಾಮೀಣ ಭಾರತದಲ್ಲಿ ಪ್ರೌಢಶಾಲೆ ಮತ್ತು ಕಾಲೇಜು ಶಿಕ್ಷಣ ಪಡೆಯುತ್ತಿರುವ 14–18 ವರ್ಷ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಹಲವರು ‘ಕನಿಷ್ಠ ಸಾಕ್ಷರತಾ ಕೌಶಲ’ಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಅಂದರೆ ಈ ವಿದ್ಯಾರ್ಥಿಗಳು ದಿನನಿತ್ಯದ ಜೀವನಕ್ಕೆ ಅಗತ್ಯವಿರುವಷ್ಟು ಓದು, ಸರಳ ಲೆಕ್ಕಾಚಾರ, ಹಣ ಎಣಿಕೆಯನ್ನು ಸರಿಯಾಗಿ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ ‘ಪ್ರಥಮ್’ ಎಂಬ ಸ್ವಯಂ ಸೇವಾ ಸಂಸ್ಥೆ ನಡೆಸಿರುವ ಸಮೀಕ್ಷಾ ವರದಿಯಲ್ಲಿ ಬಹಿರಂಗವಾಗಿದೆ. ಸಮೀಕ್ಷೆಯಲ್ಲಿ ಪಾಲ್ಗೊಂಡವರಲ್ಲಿ ಶಿಕ್ಷಣವನ್ನು ಅರ್ಧಕ್ಕೇ ನಿಲ್ಲಿಸಿದವರೂ ಇದ್ದಾರೆ.