ಹೈಕೋರ್ಟ್ ಆದೇಶದ ಕಾರಣ, ಈ ಅಧಿಕಾರಿಗಳು ಕೆ.ಎ.ಎಸ್ ಪರೀಕ್ಷೆಯಲ್ಲಿ ಪಡೆದಿದ್ದ ಅಂಕಗಳು ಇದೀಗ ಬದಲಾವಣೆಗೆ ಒಳಗಾಗಲಿದ್ದು, ಈ ಅಂಕಗಳ ಆಧಾರದ ಮೇಲೆ ಮಾಡಲಾಗಿರುವ ನೇಮಕಾತಿಗಳಲ್ಲಿ ವ್ಯತ್ಯಾಸವಾಗಲಿದೆ ಎಂದು ಅಧಿಕಾರಿಗಳ ತಂಡದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ವಿ.ವಿಶ್ವನಾಥನ್ ಅವರು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠಕ್ಕೆ ನಿವೇದಿಸಿಕೊಂಡರು.