ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬಂದ ಸಂದರ್ಭದಲ್ಲಿ ಮಠ, ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುವ ರೀತಿಯಲ್ಲೇ ರಾಹುಲ್ ಗಾಂಧಿ ಅವರನ್ನೂ ಮಠ, ದೇವಸ್ಥಾನಗಳಿಗೆ ಕರೆದುಕೊಂಡು ಹೋಗಲು ಕಾಂಗ್ರೆಸ್ ವಲಯದಲ್ಲಿ ಚಿಂತನೆ ನಡೆದಿದೆ. ಚಿತ್ರದುರ್ಗದ ಮುರುಘರಾಜೇಂದ್ರ ಮಠ, ಸುತ್ತೂರು ಮಠ ಅಥವಾ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.