ಬಿಹಾರದ ರವೀಂದ್ರ ಸಿಂಗ್ (40), ದೀಪಕ್ (35) ಹಾಗೂ ತಾಲ್ಲೂಕಿನ ಪಾಪಿನಾಯಕನಹಳ್ಳಿ ಗ್ರಾಮದ ಸುರೇಶ್ (30) ಮೃತರು. ಹೊಸಪೇಟೆ- ಬಳ್ಳಾರಿ ನಡುವೆ ಚತುಷ್ಪಥ ನಿರ್ಮಾಣ ಕೆಲಸ ನಡೆದಿದ್ದು, ಕೆಲಸ ಮುಗಿಸಿಕೊಂಡು ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ಕಾರ್ಮಿಕರೆಲ್ಲರೂ ಗ್ಯಾಮನ್ ಇಂಡಿಯಾ ಕಂಪನಿಯಲ್ಲಿ ರಸ್ತೆ ನಿರ್ಮಾಣ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು.