ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪ್ರತಿದಿನ ಬೆಳಿಗ್ಗೆ ಶಾಲೆಗೆ ಬರುವ ವಿದ್ಯಾರ್ಥಿಗಳು, ಶಿಕ್ಷಕರು ಮುಖ್ಯದ್ವಾರದ ಗೇಟಿನ ಬೀಗ ತೆಗೆಯುವ ತನಕ ರಸ್ತೆಯ ಅಕ್ಕಪಕ್ಕ ಆಟವಾಡುವುದು, ಓಡುವುದು ಹಾಗೂ ರಸ್ತೆ ಬದಿಯ ತಿನಿಸು ಅಂಗಡಿಗಳ ಮುಂದೆ ನಿಲ್ಲುತ್ತಾರೆ. ಈ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳು ಅಪಘಾತಕ್ಕೆ ಈಡಾಗುವ ಸಂಭವ ಇದೆ’ ಎಂದರು.