ಮೊದಲು ಕರಾವಳಿ ಭಾಗದಲ್ಲಿ ರಾಹುಲ್ ಪ್ರವಾಸ ಆಯೋಜಿಸಲು ಕೆಪಿಸಿಸಿ ಚಿಂತನೆ ನಡೆಸಿತ್ತು. ಅಷ್ಟೇ ಅಲ್ಲ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿರುವ ದೇವಸ್ಥಾನ, ಮಠಗಳಿಗೆ ಅವರನ್ನು ಕರೆದೊಯ್ಯಲು ಉದ್ದೇಶಿಸಲಾಗಿತ್ತು. ಆದರೆ, ಬಳ್ಳಾರಿ ಜಿಲ್ಲೆ ಹೊಸಪೇಟೆಯಿಂದ ಪ್ರವಾಸ ಆರಂಭಿಸಿ, ರಾಯಚೂರು, ಕೊಪ್ಪಳ ಮತ್ತು ಕಲಬುರ್ಗಿಗಳಲ್ಲಿ ಸಭೆಗಳನ್ನು ನಡೆಸಲು ಅವರು ಸಮ್ಮತಿಸಿದ್ದಾರೆ. ಪ್ರತಿ ಜಿಲ್ಲೆಯ ಮೂರ್ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ ಎಂದೂ ಮೂಲಗಳು ಹೇಳಿವೆ.