‘111 ವರ್ಷ ವಯೋಮಾನದ ಸ್ವಾಮೀಜಿ 8 ದಶಕಗಳಿಂದ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಸಾಮಾಜಿಕ ಸಮಾನತೆ ತರಲು ಶ್ರಮಿಸುತ್ತಿರುವ ಅವರು ಸಮಾನತಾವಾದಿಯಾಗಿದ್ದಾರೆ. ಕನ್ನಡ, ಇಂಗ್ಲಿಷ್ ಮತ್ತು ಸಂಸ್ಕೃತ ಸಾಹಿತ್ಯ ಜ್ಞಾನ ಹೊಂದಿರುವ ಅವರು, ಸಮಾಜದಲ್ಲಿನ ಕೆಟ್ಟ ಆಚರಣೆ, ಮೂಢನಂಬಿಕೆ ಮತ್ತು ತಾರತಮ್ಯ ತೊಲಗಿಸಲು ಬೋಧನೆ ಮಾಡುತ್ತಿದ್ದಾರೆ. ವರ್ಗ ಮತ್ತು ಮತಭೇದವಿಲ್ಲದೆ ಎಲ್ಲರು ದರ್ಶನ ಪಡೆಯುವ ವಾತಾವರಣ ಸೃಷ್ಟಿಸಿದ್ದಾರೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.