ಪರಿಶೀಲನೆಯ ವೇಳೆ ಇಒಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ನೀಡಿರುವ ‘ಡಿಜಿಟಲ್ ಕೀ’ ಅನ್ನು ದುರುಪಯೋಗ ಮಾಡಿಕೊಂಡು ಕಾಮಗಾರಿಗಳಿಗೆ ನಕಲಿ ಥಂಬ್ ನೀಡಿ ಹಣವನ್ನು ನೀಡಿರುವುದು ಬೆಳಕಿಗೆ ಬಂದಿದೆ. ರಂಜಿತ್ ಅವರನ್ನು ವಿಚಾರಿಸಿದಾಗ, ‘ಇಒ ಅವರು ಗ್ರಾಮ ಪಂಚಾಯಿತಿಗಳಿಗೆ ಆಗ್ಗಾಗ್ಗೆ ಭೇಟಿ ನೀಡುತ್ತಿದ್ದರು. ಖಾತ್ರಿ ಕಾಮಗಾರಿಗೆ ಸಂಬಂಧಪಟ್ಟಂತೆ ಹೆಬ್ಬೆಟ್ಟಿನ ಗುರುತನ್ನು ತನಗೆ ಹೊಂದಾಣಿಕೆ ಆಗುವಂತೆ ಮಾಡಿಕೊಂಡಿರುವೆ’ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಆಗ ಮತ್ತಷ್ಟು ಕುಪಿತರಾದ ಮಿಶ್ರ ಕಪಾಳಕ್ಕೆ ಲಘುವಾಗಿ ಹೊಡೆದಿದ್ದಾರೆ ಎನ್ನಲಾಗಿದೆ.