ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಂಗ್ ಇಂಡಿಯಾದಿಂದ ₹ 414 ಕೋಟಿ ತೆರಿಗೆ ಬಾಕಿ

Last Updated 20 ಜನವರಿ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಂಗ್ ಇಂಡಿಯಾ ಕಂಪನಿ ಪಾವತಿಸಬೇಕಿರುವ ₹ 414 ಕೋಟಿ ತೆರಿಗೆ ಸಂಬಂಧ ತೆರಿಗೆ ಇಲಾಖೆ ಹೊರಡಿಸಿದ ಆದೇಶದ ಪ್ರತಿಯನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೆಹಲಿ ಕೋರ್ಟ್‌ಗೆ ಶನಿವಾರ ಸಲ್ಲಿಸಿದ್ದಾರೆ.

ಯಂಗ್ ಇಂಡಿಯಾ ಕಂಪನಿಗೆ ನೀಡಲಾಗಿದ್ದ ತೆರಿಗೆ ವಿನಾಯಿತಿಯನ್ನು ರದ್ದುಪಡಿಸಿದ ಆದೇಶ ಇದಾಗಿದ್ದು, ಕಂಪನಿ ಸಲ್ಲಿಸಬೇಕಿರುವ ತೆರಿಗೆಯ ವಿವರಗಳೂ ಈ ಆದೇಶದಲ್ಲಿದೆ. ಯಂಗ್ ಇಂಡಿಯಾದ ಬಹುಪಾಲು ಷೇರುಗಳನ್ನು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹೊಂದಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆವರೆಗೆ ಈ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಇರಿಸಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಮಾರ್ಚ್ 27ಕ್ಕೆ ನಿಗದಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT