ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಂದ 8 ಕೋಟಿ ಪಡೆದರು ಎಂದು ಸಿಎಂ ಶಿಷ್ಯ ವರ್ತೂರು ಪ್ರಕಾಶ್ ಅವರು ಸಿದ್ದರಾಮಯ್ಯ ವಿರುದ್ಧ ಆರೋಪಿಸಿದ್ದರು. ಆದರೆ ಅದಕ್ಕೆ ಸಿದ್ದರಾಮಯ್ಯ ಉತ್ತರಿಸಿದ್ದಾರೆಯೇ? ಕೇವಲ ಹಾರಿಕೆಯ ಉತ್ತರ ಕೊಟ್ಟು ಜಾರಿಕೊಳ್ಳುವುದು ಸಿದ್ದರಾಮಯ್ಯ ಅವರ ಜಾಯಮಾನ ಎಂದು ಟೀಕಿಸಿದ್ದಾರೆ.