ಸಭೆ– ಸಮಾರಂಭಗಳಲ್ಲಿ ರಾಜಕಾರಣಿಗಳು, ಸಾಹಿತಿಗಳು ತಮ್ಮ ಅಭಿಪ್ರಾಯವನ್ನು ಮಂಡಿಸಲು ಎಲ್ಲಿದೆ ಅಡ್ಡಿ? ನಾಲ್ಕಾರು ಪ್ರಮುಖ ವ್ಯಕ್ತಿಗಳ ಹತ್ಯೆಯಾಯಿತು (ದಾಭೋಲ್ಕರ್, ಕಲಬುರ್ಗಿ, ಗೌರಿ ಲಂಕೇಶ್ ಮುಂತಾದವರು). ಇದರಿಂದಾಗಿ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಗಿದೆ ಎಂದು ತಿಳಿವಳಿಕೆ ಇರುವವರೇ ಹಲುಬಿದರೆ ಹೇಗೆ? ನಮ್ಮ ರಾಜ್ಯದಲ್ಲಿ ವಿವಿಧ ಪಕ್ಷಗಳ ರಾಜಕೀಯ ಪ್ರಮುಖರು ಪರಸ್ಪರರನ್ನು ಹಂಗಿಸಿ ಹಳಿಯುವುದನ್ನು ನೋಡಿದರೆ, ಅಭಿವ್ಯಕ್ತಿ ಸ್ವಾತಂತ್ರ್ಯ ಎಷ್ಟು ಮುಕ್ತವಾಗಿ ವಿರಾಜಿಸುತ್ತಿದೆ ಎನ್ನುವುದು ವೇದ್ಯವಾದೀತು! ನಿಜದಲ್ಲಿ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಿಲ್ಲ, ಅದರ ದುರ್ಬಳಕೆಯ ರೆಕ್ಕೆಗಳನ್ನು ಕತ್ತರಿಸುವುದು ಸಾಧ್ಯವಿಲ್ಲ ಎನ್ನುವ ಪರಿಸ್ಥಿತಿ ಇದೆ!