ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡ ಇಬ್ಬರು ಯುವಕರನ್ನು ಆಸ್ಪತ್ರೆಗೆ ಕರೆದೊಯ್ಯಲು ಈ ಮೂವರು ಪೊಲೀಸರು ನಿರಾಕರಿಸಿದ್ದರು. ಇದರಿಂದಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ತಡವಾಗಿತ್ತು. ನಂತರ ಆ ಇಬ್ಬರೂ ಯುವಕರು ಮೃತಪಟ್ಟಿದ್ದರು. ‘ಮೂವರು ಪೊಲೀ
ಸರ ವಿರುದ್ಧ ಐಪಿಸಿ ಸೆಕ್ಷನ್ 304ಎ ಅಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಸಹರಾನ್ಪುರ ಎಸ್ಪಿ ಪ್ರಬಲ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.