ತುಮಕೂರು: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೇ ಇರಲಿ, ಹಿರಿಯ ಮುಖಂಡರೇ ಇರಲಿ, ಟಿಕೆಟ್ ತಮಗೆ ಲಭಿಸುತ್ತದೆ ಎಂಬ ಆತ್ಮವಿಶ್ವಾಸ ಹೊಂದಿರುವವರೇ ಆಗಲಿ, ಯಾರೂ ಮುಂದಿನ ಚುನಾವಣೆಯಲ್ಲಿ ತಮಗೆ ಟಿಕೆಟ್ ಎಂದು ಎಲ್ಲೂ ಘೋಷಣೆ ಮಾಡಿಕೊಳ್ಳುವಂತಿಲ್ಲ’ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಎಚ್ಚರಿಕೆ ನೀಡಿದರು.