ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಜೆಡಿಎಸ್ ಶಾಸಕರಾದ ಮಾನಪ್ಪ ವಜ್ಜಲ್ (ಲಿಂಗಸುಗೂರು) ಮತ್ತು ಡಾ. ಶಿವರಾಜ ಪಾಟೀಲ (ರಾಯಚೂರು ನಗರ) ವಿಧಾನಸಭಾ ಕಾರ್ಯದರ್ಶಿ ಎಸ್. ಮೂರ್ತಿ ಅವರನ್ನು ಸೋಮವಾರ ಭೇಟಿ ಮಾಡಿ, ‘ಇದೇ 18ರಂದು ನಾವಿಬ್ಬರೂ ಸ್ವ ಇಚ್ಛೆಯಿಂದ ನೀಡಿರುವ ರಾಜೀನಾಮೆಯನ್ನು ಅದೇ ದಿನದಿಂದ ಅನ್ವಯವಾಗುವಂತೆ ಕಾನೂನು ಚೌಕಟ್ಟಿನಲ್ಲಿ ಅಂಗೀಕರಿಸಬೇಕು’ ಎಂದು ಮನವಿ ಮಾಡಿದರು.