ಆರೋಗ್ಯ ಕೇಂದ್ರ ತಗ್ಗು ಪ್ರದೇಶದಲ್ಲಿದ್ದು, ಮಳೆ ಬಂದರೆ ಆಸ್ಪತ್ರೆಯೊಳಗೆ ನೀರು ನುಗ್ಗುತ್ತವೆ. ಅಲ್ಲದೇ ಆಸ್ಪತ್ರೆ ಮುಂದೆಯೇ ಮಳೆ ನೀರು ನಿಂತು ದುರ್ನಾತ ಹಾಗೂ ಸೊಳ್ಳೆಗಳ ಕಾಟ ಹೆಚ್ಚುತ್ತದೆ. ಸರಿಯಾದ ಸ್ಥಳದಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಿಸಿಕೊಡುವಂತೆ ಒತ್ತಾಯಿಸುತ್ತಾ ಬಂದರೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಆಸಕ್ತಿ ತೋರುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.