ಭೋಪಾಲ್: ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ತಮ್ಮ ಅಧಿಕೃತ ಸಂವಹನದಲ್ಲಿ ದಲಿತ ಪದವನ್ನು ಉಪಯೋಗಿಸಬಾರದು ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ.
ಗ್ವಾಲಿಯರ್ ನ್ಯಾಯಪೀಠ ಈ ಸೂಚನೆ ನೀಡಿದ್ದು, ಭಾರತದ ಸಂವಿಧಾನದಲ್ಲಿ ದಲಿತ ಎಂಬ ಪದ ಉಲ್ಲೇಖವಾಗಿಲ್ಲ. ಹಾಗಾಗಿ ದಲಿತ ಪದದ ಬಳಕೆಯನ್ನು ತಡೆಹಿಡಿಯಬೇಕು. ಅದರ ಬದಲು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಎಂಬ ಪದ ಬಳಸಬಹುದು ಎಂದು ತಿಳಿಸಿದೆ.
ಸಾಮಾಜಿಕ ಕಾರ್ಯಕರ್ತ ಮೋಹನ್ ಲಾಲ್ ಮೋಹರ್ ಅವರು ಸರ್ಕಾರದ ಪರಿಭಾಷೆಯ ನಡುವೆ ಅನಧಿಕೃತವಾಗಿ ದಲಿತ ಪದ ಬಳಸುವುದನ್ನು ವಿರೋಧಿಸಿ ಡಿಸೆಂಬರ್ನಲ್ಲಿ ಸಾರ್ವಜನಿಕ ಅರ್ಜಿ ಸಲ್ಲಿಸಿದ್ದರು ಪರ ವಕೀಲ ಜಿತೇಂದ್ರ ಕುಮಾರ್ ಶರ್ಮ ಹೇಳಿದ್ದಾರೆ.
ಮೇಲ್ವರ್ಗದವರು ದಲಿತ ಪದವನ್ನು ಅವಹೇಳನಕಾರಿಯಾಗಿ ಬಳಸಿಕೊಳ್ಳುತ್ತಿದ್ದು, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಿದ್ದರು.