‘ಈ ಎರಡೂ ದೇಶಗಳ ಗಡಿಯಲ್ಲಿ ಕಳೆದ ಹತ್ತು ದಿನಗಳಿಂದ ಇರುವ ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ಉಲ್ಲೇಖಿಸಿದ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗಳ ವಕ್ತಾರ ಸ್ಟೀಫನ್ ಡುವಾರಾರಿಕ್, 'ಹತ್ತು ದಿನದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಈ ವಿಚಾರದ ಬಗ್ಗೆ ನಾನು ನಿರ್ದಿಷ್ಟವಾಗಿ ಮಾತನಾಡುವುದಿಲ್ಲ. ಉತ್ತಮ ವಿಚಾರಗಳು ಇದ್ದಲ್ಲಿ, ಜಾಗತಿಕ ವಿವಾದಗಳ ಪರಿಹಾರಕ್ಕೆ ಮಧ್ಯಸ್ಥಿಕೆ ವಹಿಸಲು ವಿಶ್ವಸಂಸ್ಥೆ ಸದಾ ಸಿದ್ದವಿರುತ್ತದೆ. ಆದರೆ ಎರಡೂ ದೇಶಗಳು ಇದಕ್ಕೆ ಒಪ್ಪಿಕೊಳ್ಳಬೇಕಿದೆ’ ಎಂದಿದ್ದಾರೆ.