ವೈವಿಧ್ಯಮಯವಾದ ಕಾಡು ಪ್ರಾಣಿಗಳಿಂದ ಕೂಡಿದ ಅರಣ್ಯ ಸಂಪತ್ತನ್ನು ಕರ್ನಾಟಕ ಹೊಂದಿದೆ ಎಂಬುದನ್ನು ಸ್ತಬ್ಧಚಿತ್ರದಲ್ಲಿ ಪ್ರತಿಬಿಂಬಿಸಲಾಗಿದೆ. ಗಣರಾಜ್ಯೋತ್ಸವ ಪಥಸಂಚಲನದಲ್ಲಿ 14 ರಾಜ್ಯಗಳ ಸ್ತಬ್ಧಚಿತ್ರಗಳಿಗೆ ಭಾಗವಹಿಸಲು ಅವಕಾಶವಿದ್ದು, ರಾಜ್ಯದ ಸ್ತಬ್ಧಚಿತ್ರ ಸತತ 8ನೇ ಬಾರಿಗೆ ಆಯ್ಕೆಯಾಗಿದೆ ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.