<p><strong>ರಾಂಚಿ:</strong> ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ತಪ್ಪಿತಸ್ಥ ಎಂದು ಬುಧವಾರ ಸಿಬಿಐ ವಿಶೇಷ ನ್ಯಾಯಾಲಯ ಘೋಷಿಸಿದೆ.</p>.<p>ಡಿ.23ರಂದು ಸಿಬಿಐ ನ್ಯಾಯಾಲಯ ಮೇವು ಹಗರಣದ ಎರಡನೇ ಪ್ರಕರಣದ ತೀರ್ಪು ಪ್ರಕಟಿಸಿತ್ತು. ಆ ಪ್ರಕರಣದಲ್ಲಿ ದೋಷಮುಕ್ತರಾಗಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಮಿಶ್ರಾ ಅವರನ್ನು ಮೂರನೇ ಪ್ರಕರಣದಲ್ಲಿ ನ್ಯಾಯಾಲಯ ದೋಷಿ ಎಂದಿದೆ.</p>.<p>ಚಾಯಿಬಾಸಾ ಖಜಾನೆಯಲ್ಲಿ ₹33.67 ಕೋಟಿ ಮೊತ್ತದ ವಂಚನೆ ಪ್ರಕರಣದ ಸಂಬಂಧ ಇಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, 5 ವರ್ಷ ಶಿಕ್ಷೆ ಪ್ರಕಟಿಸಿದೆ.</p>.<p>‘ಲಾಲು ಪ್ರಸಾದ್ ಅವರ ವಿರುದ್ಧ ಬಿಜೆಪಿ, ಆರ್ಎಸ್ಎಸ್ ಹಾಗೂ ಮುಖ್ಯವಾಗಿ ನಿತೀಶ್ ಕುಮಾರ್ ಹೂಡಿರುವ ಪಿತೂರಿ ಜನರಿಗೆ ತಿಳಿದಿದೆ. ಮೇವು ಹಗರಣಕ್ಕೆ ಸಂಬಂಧಿಸಿದ ತೀರ್ಪುಗಳ ವಿರುದ್ಧ ಮೇಲ್ಮನವಿ ಸಲ್ಲಿಸುತ್ತೇವೆ’ ಎಂದು ಲಾಲು ಪುತ್ರ ತೇಜಸ್ವಿ ಯಾದವ್ ಹೇಳಿಕೆ ನೀಡಿದ್ದಾರೆ.</p>.<p>ಲಾಲು ಪ್ರಸಾದ್ ವಿರುದ್ಧ ಇರುವ ಆರು ಪ್ರಕರಣಗಳ ಪೈಕಿ ಒಟ್ಟು ಮೂರು ಪ್ರಕರಣಗಳಲ್ಲಿ ಅವರು ದೋಷಿ ಎಂದು ಘೋಷಣೆಯಾಗಿದೆ. 2013ರಲ್ಲಿ ಐದು ವರ್ಷ ಹಾಗೂ 2017ರಲ್ಲಿ ಮೂರೂವರೆ ವರ್ಷ ಜೈಲು ಶಿಕ್ಷೆಯಾಗಿದೆ.</p>.<p><strong>ಮೇವು ಹಗರಣ: ಅಂದಿನಿಂದ ಇಂದಿನವರೆಗೆ</strong></p>.<p>ಜನವರಿ, 1996: ಚಾಯಿಬಾಸಾ ಜಿಲ್ಲಾಧಿಕಾರಿಯಾಗಿದ್ದ ಅಮಿತ್ ಖರೆ ಅವರು ಪಶುಸಂಗೋಪನಾ ಇಲಾಖೆಯಲ್ಲಿ ತಪಾಸಣೆ ನಡೆಸಿದಾಗ ಮೇವು ಹಗರಣ ಬಯಲಿಗೆ. ಶೋಧಕಾರ್ಯದ ವೇಳೆ ವಶಪಡಿಸಿಕೊಳ್ಳಲಾಗಿದ್ದ ದಾಖಲೆಗಳು ಹಗರಣ ನಡೆದಿರುವ ಬಗ್ಗೆ ಪುರಾವೆ ಒದಗಿಸಿತ್ತು</p>.<p>ಮಾರ್ಚ್, 1996: ಮೇವು ಹಗರಣದ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಿದ ಪಟ್ನಾ ಹೈಕೋರ್ಟ್. ತೀರ್ಪಿನ ಅನುಸಾರ ಚಾಯಿಬಾಸಾ (ಅವಿಭಜಿತ ಬಿಹಾರ) ಖಜಾನೆಯಿಂದ ಹಣ ಪಡೆದ ಪ್ರಕರಣದಲ್ಲಿ ಎಫ್ಐಆರ್ ದಾಖಲು</p>.<p>ಜೂನ್, 1997: ಆರೋಪಪಟ್ಟಿ ಸಲ್ಲಿಸಿದ ಸಿಬಿಐ. ಆರೋಪಿಗಳಲ್ಲಿ ಒಬ್ಬರಾಗಿ ಲಾಲು ಪ್ರಸಾದ್ ಹೆಸರು ದಾಖಲು</p>.<p>ಜುಲೈ, 1997: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಲಾಲು. ಪತ್ನಿ ರಾಬ್ಡಿದೇವಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ. ಸಿಬಿಐ ನ್ಯಾಯಾಲಯಕ್ಕೆ ಶರಣಾದ ಲಾಲು. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ</p>.<p>ಏಪ್ರಿಲ್, 2000: ರಾಬ್ಡಿ ದೇವಿ ಕೂಡ ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಎಂದು ಹೆಸರಿಸಲಾಯಿತು. ಆದರೆ, ಅವರಿಗೆ ಜಾಮೀನು ಮಂಜೂರು</p>.<p>ಅಕ್ಟೋಬರ್, 2001: ರಾಜ್ಯ ವಿಭಜನೆ ನಂತರ ಜಾರ್ಖಂಡ್ ಹೈಕೋರ್ಟ್ಗೆ ಪ್ರಕರಣ ವರ್ಗಾಯಿಸಿದ ಸುಪ್ರೀಂ ಕೋರ್ಟ್</p>.<p>ಫೆಬ್ರುವರಿ, 2002: ಜಾರ್ಖಂಡ್ನ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ವಿಚಾರಣೆ ಆರಂಭ</p>.<p>ಡಿಸೆಂಬರ್, 2006: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಲಾಲು ಮತ್ತು ರಾಬ್ಡಿದೇವಿ ಅವರನ್ನು ಖುಲಾಸೆ ಮಾಡಿದ ಪಟ್ನಾದ ಅಧೀನ ನ್ಯಾಯಾಲಯ</p>.<p>ಮಾರ್ಚ್, 2012: ಲಾಲು ಮತ್ತು ಪ್ರಕರಣದ ಮತ್ತೊಬ್ಬ ಆರೋಪಿ ಜಗನ್ನಾಥ್ ಮಿಶ್ರಾ ವಿರುದ್ಧ ದೋಷಾರೋಪ ನಿಗದಿ</p>.<p>ಸೆಪ್ಟೆಂಬರ್ 30, 2013: ಮೇವು ಹಗರಣದ ಮತ್ತೊಂದು ಪ್ರಕರಣದಲ್ಲಿ (ಆರ್ಸಿ 20ಎ/96) ಲಾಲು, ಮಿಶ್ರಾ ಮತ್ತು ಇತರ 45 ಮಂದಿ ತಪ್ಪಿತಸ್ಥರು ಎಂದು ಸಾಬೀತು. ರಾಂಚಿ ಜೈಲಿಗೆ ಲಾಲು. ಲೋಕಸಭೆಯಿಂದ ಅನರ್ಹಗೊಂಡ ಆರ್ಜೆಡಿ ಮುಖ್ಯಸ್ಥ. ಚುನಾವಣೆ ಸ್ಪರ್ಧಿಸುವುದಕ್ಕೂ ನಿರ್ಬಂಧ</p>.<p>ಡಿಸೆಂಬರ್, 2013: ಲಾಲುಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್</p>.<p>ಮೇ, 2017: ಸುಪ್ರೀಂ ಕೋರ್ಟ್ನ ಮೇ 8ರ ತೀರ್ಪಿನ ನಂತರ ವಿಚಾರಣೆ ಪುನಾರರಂಭ. ದೇವಗಡ ಖಜಾನೆಯಿಂದ ಹಣ ಪಡೆದ ಪ್ರಕರಣಕ್ಕೆ (ಆರ್ಸಿ 64ಎ/96) ಸಂಬಂಧಿಸಿದಂತೆ ಪ್ರತ್ಯೇಕ ವಿಚಾರಣೆ ಆರಂಭಿಸುವಂತೆ ಅಧೀನ ನ್ಯಾಯಾಲಯಕ್ಕೆ ಸೂಚಿಸಿದ ‘ಸುಪ್ರೀಂ’. ಒಂಬತ್ತು ತಿಂಗಳೊಳಗೆ ವಿಚಾರಣೆ ಮುಕ್ತಾಯಗೊಳಿಸಲು ನಿರ್ದೇಶನ</p>.<p>ಡಿಸೆಂಬರ್ 23, 2017: ಲಾಲು ಪ್ರಸಾದ್ ಮತ್ತು ಇತರ 15 ಆರೋಪಿಗಳು ಅಪರಾಧಿಗಳು ಎಂದು ಘೋಷಿಸಿದ ಸಿಬಿಐ ವಿಶೇಷ ನ್ಯಾಯಾಲಯ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ತಪ್ಪಿತಸ್ಥ ಎಂದು ಬುಧವಾರ ಸಿಬಿಐ ವಿಶೇಷ ನ್ಯಾಯಾಲಯ ಘೋಷಿಸಿದೆ.</p>.<p>ಡಿ.23ರಂದು ಸಿಬಿಐ ನ್ಯಾಯಾಲಯ ಮೇವು ಹಗರಣದ ಎರಡನೇ ಪ್ರಕರಣದ ತೀರ್ಪು ಪ್ರಕಟಿಸಿತ್ತು. ಆ ಪ್ರಕರಣದಲ್ಲಿ ದೋಷಮುಕ್ತರಾಗಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಮಿಶ್ರಾ ಅವರನ್ನು ಮೂರನೇ ಪ್ರಕರಣದಲ್ಲಿ ನ್ಯಾಯಾಲಯ ದೋಷಿ ಎಂದಿದೆ.</p>.<p>ಚಾಯಿಬಾಸಾ ಖಜಾನೆಯಲ್ಲಿ ₹33.67 ಕೋಟಿ ಮೊತ್ತದ ವಂಚನೆ ಪ್ರಕರಣದ ಸಂಬಂಧ ಇಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, 5 ವರ್ಷ ಶಿಕ್ಷೆ ಪ್ರಕಟಿಸಿದೆ.</p>.<p>‘ಲಾಲು ಪ್ರಸಾದ್ ಅವರ ವಿರುದ್ಧ ಬಿಜೆಪಿ, ಆರ್ಎಸ್ಎಸ್ ಹಾಗೂ ಮುಖ್ಯವಾಗಿ ನಿತೀಶ್ ಕುಮಾರ್ ಹೂಡಿರುವ ಪಿತೂರಿ ಜನರಿಗೆ ತಿಳಿದಿದೆ. ಮೇವು ಹಗರಣಕ್ಕೆ ಸಂಬಂಧಿಸಿದ ತೀರ್ಪುಗಳ ವಿರುದ್ಧ ಮೇಲ್ಮನವಿ ಸಲ್ಲಿಸುತ್ತೇವೆ’ ಎಂದು ಲಾಲು ಪುತ್ರ ತೇಜಸ್ವಿ ಯಾದವ್ ಹೇಳಿಕೆ ನೀಡಿದ್ದಾರೆ.</p>.<p>ಲಾಲು ಪ್ರಸಾದ್ ವಿರುದ್ಧ ಇರುವ ಆರು ಪ್ರಕರಣಗಳ ಪೈಕಿ ಒಟ್ಟು ಮೂರು ಪ್ರಕರಣಗಳಲ್ಲಿ ಅವರು ದೋಷಿ ಎಂದು ಘೋಷಣೆಯಾಗಿದೆ. 2013ರಲ್ಲಿ ಐದು ವರ್ಷ ಹಾಗೂ 2017ರಲ್ಲಿ ಮೂರೂವರೆ ವರ್ಷ ಜೈಲು ಶಿಕ್ಷೆಯಾಗಿದೆ.</p>.<p><strong>ಮೇವು ಹಗರಣ: ಅಂದಿನಿಂದ ಇಂದಿನವರೆಗೆ</strong></p>.<p>ಜನವರಿ, 1996: ಚಾಯಿಬಾಸಾ ಜಿಲ್ಲಾಧಿಕಾರಿಯಾಗಿದ್ದ ಅಮಿತ್ ಖರೆ ಅವರು ಪಶುಸಂಗೋಪನಾ ಇಲಾಖೆಯಲ್ಲಿ ತಪಾಸಣೆ ನಡೆಸಿದಾಗ ಮೇವು ಹಗರಣ ಬಯಲಿಗೆ. ಶೋಧಕಾರ್ಯದ ವೇಳೆ ವಶಪಡಿಸಿಕೊಳ್ಳಲಾಗಿದ್ದ ದಾಖಲೆಗಳು ಹಗರಣ ನಡೆದಿರುವ ಬಗ್ಗೆ ಪುರಾವೆ ಒದಗಿಸಿತ್ತು</p>.<p>ಮಾರ್ಚ್, 1996: ಮೇವು ಹಗರಣದ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಿದ ಪಟ್ನಾ ಹೈಕೋರ್ಟ್. ತೀರ್ಪಿನ ಅನುಸಾರ ಚಾಯಿಬಾಸಾ (ಅವಿಭಜಿತ ಬಿಹಾರ) ಖಜಾನೆಯಿಂದ ಹಣ ಪಡೆದ ಪ್ರಕರಣದಲ್ಲಿ ಎಫ್ಐಆರ್ ದಾಖಲು</p>.<p>ಜೂನ್, 1997: ಆರೋಪಪಟ್ಟಿ ಸಲ್ಲಿಸಿದ ಸಿಬಿಐ. ಆರೋಪಿಗಳಲ್ಲಿ ಒಬ್ಬರಾಗಿ ಲಾಲು ಪ್ರಸಾದ್ ಹೆಸರು ದಾಖಲು</p>.<p>ಜುಲೈ, 1997: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಲಾಲು. ಪತ್ನಿ ರಾಬ್ಡಿದೇವಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ. ಸಿಬಿಐ ನ್ಯಾಯಾಲಯಕ್ಕೆ ಶರಣಾದ ಲಾಲು. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ</p>.<p>ಏಪ್ರಿಲ್, 2000: ರಾಬ್ಡಿ ದೇವಿ ಕೂಡ ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಎಂದು ಹೆಸರಿಸಲಾಯಿತು. ಆದರೆ, ಅವರಿಗೆ ಜಾಮೀನು ಮಂಜೂರು</p>.<p>ಅಕ್ಟೋಬರ್, 2001: ರಾಜ್ಯ ವಿಭಜನೆ ನಂತರ ಜಾರ್ಖಂಡ್ ಹೈಕೋರ್ಟ್ಗೆ ಪ್ರಕರಣ ವರ್ಗಾಯಿಸಿದ ಸುಪ್ರೀಂ ಕೋರ್ಟ್</p>.<p>ಫೆಬ್ರುವರಿ, 2002: ಜಾರ್ಖಂಡ್ನ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ವಿಚಾರಣೆ ಆರಂಭ</p>.<p>ಡಿಸೆಂಬರ್, 2006: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಲಾಲು ಮತ್ತು ರಾಬ್ಡಿದೇವಿ ಅವರನ್ನು ಖುಲಾಸೆ ಮಾಡಿದ ಪಟ್ನಾದ ಅಧೀನ ನ್ಯಾಯಾಲಯ</p>.<p>ಮಾರ್ಚ್, 2012: ಲಾಲು ಮತ್ತು ಪ್ರಕರಣದ ಮತ್ತೊಬ್ಬ ಆರೋಪಿ ಜಗನ್ನಾಥ್ ಮಿಶ್ರಾ ವಿರುದ್ಧ ದೋಷಾರೋಪ ನಿಗದಿ</p>.<p>ಸೆಪ್ಟೆಂಬರ್ 30, 2013: ಮೇವು ಹಗರಣದ ಮತ್ತೊಂದು ಪ್ರಕರಣದಲ್ಲಿ (ಆರ್ಸಿ 20ಎ/96) ಲಾಲು, ಮಿಶ್ರಾ ಮತ್ತು ಇತರ 45 ಮಂದಿ ತಪ್ಪಿತಸ್ಥರು ಎಂದು ಸಾಬೀತು. ರಾಂಚಿ ಜೈಲಿಗೆ ಲಾಲು. ಲೋಕಸಭೆಯಿಂದ ಅನರ್ಹಗೊಂಡ ಆರ್ಜೆಡಿ ಮುಖ್ಯಸ್ಥ. ಚುನಾವಣೆ ಸ್ಪರ್ಧಿಸುವುದಕ್ಕೂ ನಿರ್ಬಂಧ</p>.<p>ಡಿಸೆಂಬರ್, 2013: ಲಾಲುಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್</p>.<p>ಮೇ, 2017: ಸುಪ್ರೀಂ ಕೋರ್ಟ್ನ ಮೇ 8ರ ತೀರ್ಪಿನ ನಂತರ ವಿಚಾರಣೆ ಪುನಾರರಂಭ. ದೇವಗಡ ಖಜಾನೆಯಿಂದ ಹಣ ಪಡೆದ ಪ್ರಕರಣಕ್ಕೆ (ಆರ್ಸಿ 64ಎ/96) ಸಂಬಂಧಿಸಿದಂತೆ ಪ್ರತ್ಯೇಕ ವಿಚಾರಣೆ ಆರಂಭಿಸುವಂತೆ ಅಧೀನ ನ್ಯಾಯಾಲಯಕ್ಕೆ ಸೂಚಿಸಿದ ‘ಸುಪ್ರೀಂ’. ಒಂಬತ್ತು ತಿಂಗಳೊಳಗೆ ವಿಚಾರಣೆ ಮುಕ್ತಾಯಗೊಳಿಸಲು ನಿರ್ದೇಶನ</p>.<p>ಡಿಸೆಂಬರ್ 23, 2017: ಲಾಲು ಪ್ರಸಾದ್ ಮತ್ತು ಇತರ 15 ಆರೋಪಿಗಳು ಅಪರಾಧಿಗಳು ಎಂದು ಘೋಷಿಸಿದ ಸಿಬಿಐ ವಿಶೇಷ ನ್ಯಾಯಾಲಯ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>