‘ನನ್ನ ಬೆಂಬಲಿಗರಿಗೆ ಟಿಕೆಟ್ ತಪ್ಪಿಸುವ ಪ್ರಯತ್ನ ಜಿಲ್ಲಾ ಮಟ್ಟದಲ್ಲಿ ನಡೆದಿದೆ. ಹೀಗಾಗಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಬಗ್ಗೆ ಮಾತ್ರ ನನಗೆ ಅಸಮಾಧಾನವಿದೆ. ಉಳಿದಂತೆ ರಾಜ್ಯ ಮಟ್ಟದ ನಾಯಕರ ಬಗ್ಗೆ ಅಸಮಾಧಾನವಿಲ್ಲ. ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಸೇರುವ ಯೋಚನೆಯೂ ಇಲ್ಲ’ ಎಂದರು. ‘ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವ ವ್ಯಕ್ತಿ ನಾನಲ್ಲ’ ಎಂದು ಸ್ಪಷ್ಟಪಡಿಸಿದರು