ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಖಾಕಿಗಳ ಕೆಲಸದಲ್ಲಿ ಖಾದಿಯ ಹಸ್ತಕ್ಷೇಪ ಹೆಚ್ಚಳವಾಗಿದೆ. ಇಲಾಖೆಯಲ್ಲಿ ಬರೀ ರಾಜಕೀಯವೇ ಹಾಸುಹೊಕ್ಕಾಗಿದೆ. ನನಗೂ ಬೆದರಿಕೆ ಎದುರಾಗಿತ್ತು. ಆಗ ಎದೆಗುಂದಿದ್ದರೆ ಕಲ್ಲಪ್ಪ ಹಂಡಿಭಾಗ, ಎಂ.ಕೆ. ಗಣಪತಿ ರೀತಿ ನಾನೂ ಆತ್ಮಹತ್ಯೆ ಮಾಡಿಕೊಳ್ಳಬೇಕಿತ್ತು. ಆದರೆ ನನ್ನಲ್ಲಿನ ಛಲ, ಧೈರ್ಯದ ಕಾರಣ ಬದುಕಿ ಉಳಿದಿದ್ದೇನೆ’ ಎಂದು ಹೇಳಿದರು.