ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಂಕಾವಧೂತರ ರಥೋತ್ಸವ ಅದ್ಧೂರಿ

Last Updated 1 ಫೆಬ್ರುವರಿ 2018, 10:12 IST
ಅಕ್ಷರ ಗಾತ್ರ

ಕುರುಗೋಡು: ಇಲ್ಲಿಗೆ ಸಮೀಪದ ದಮ್ಮೂರು ಗ್ರಾಮದ ವೆಂಕಾವಧೂತರ ರಥೋತ್ಸವ ಬುಧವಾರ ವಿಜೃಂಭಣೆಯಿಂದ ಜರುಗಿತು. ಸಂಜೆ ಚಂದ್ರಗ್ರಹಣ ಇರುವ ಕಾರಣ ಮಧ್ಯಾಹ್ನ ರಥೋತ್ಸವ ನಡೆಯಿತು. ಶ್ರೀಮಠದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಜರುಗಿದವು.

ವಿವಿಧ ಬಗೆಯ ಹೂ ಮತ್ತು ಗೊಂಬೆಗಳಿಂದ ಅಲಂಕೃತಗೊಂಡ್ದಿದ ರಥವನ್ನು ಭಕ್ತರು ಶ್ರೀಮಠದ ಆವರಣದಿಂದ ಎದುರು ಬಸವಣ್ಣ ಕಟ್ಟೆಯವರೆಗೆ ಎಳೆದೊಯ್ದು ಪುನಃ ಸ್ವಸ್ಥಾನಕ್ಕೆ ಎಳೆದು ತಂದರು. ದಮ್ಮೂರಿನ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಆಗಮಿಸಿದ್ದರು.

ರಥೋತ್ಸವ ಅಂಗವಾಗಿ 15 ದಿನಗಳಿಂದ ಶ್ರೀಮಠದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಾಮಾಜಿಕ ನಾಟಕ ‘ಕುರುಬ ಹಚ್ಚಿದ ಕುಂಕುಮ’ ಪ್ರದರ್ಶನಗೊಂಡಿತು. ಪಂಚಾಯ್ತಿ ವತಿಯಿಂದ ಕುಡಿಯುವ ನೀರು, ಬೀದಿ ದೀಪ ವ್ಯವಸ್ಥೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT