ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷದ ಬಲವೃದ್ಧಿ: ಶ್ರೀರಾಮುಲು ಅಭಿಮತ

Last Updated 1 ಫೆಬ್ರುವರಿ 2018, 10:13 IST
ಅಕ್ಷರ ಗಾತ್ರ

ಸಂಡೂರು: ‘ಕಾರ್ತಿಕೇಯ ಘೋರ್ಪಡೆಯವರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವುದು ಪಕ್ಷಕ್ಕೆ ದೊಡ್ಡ ಶಕ್ತಿಯನ್ನು ತಂದುಕೊಟ್ಟಿದೆ’ ಎಂದು ಸಂಸದ ಬಿ. ಶ್ರೀರಾಮುಲು ಅಭಿಪ್ರಾಯಪಟ್ಟರು.

ಪಟ್ಟಣದ ಕಾರ್ತಿಕೇಯ ನಿವಾಸದಲ್ಲಿ ಮಂಗಳವಾರ ರಾತ್ರಿ ಕಾರ್ತಿಕೇಯ ಅವರನ್ನು ಭೇಟಿ ಮಾಡಿ ಮಾತನಾಡಿದ ಅವರು, ‘ಜಿಲ್ಲೆಯ ಜನತೆ ಈ ಬಾರಿ ಬದಲಾವಣೆಯನ್ನು ಬಯಸಿದ್ದಾರೆ. ಘೋರ್ಪಡೆಯವರ ಪಕ್ಷ ಸೇರ್ಪಡೆಯಿಂದ ಜಿಲ್ಲೆ ಮಾತ್ರವಲ್ಲದೆ, ಹೈದರಾಬಾದ್ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ’ ಎಂದರು.

‘ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದಲ್ಲಿ 52 ಸಾವಿರಕ್ಕೂ ಹೆಚ್ಚು ಮತ ನನಗೆ ಲಭಿಸಿತ್ತು. ಎಲ್ಲೆಡೆಯಂತೆ ತಾಲ್ಲೂಕಿನಲ್ಲಿಯೂ ಬಿಜೆಪಿ ಬಗ್ಗೆ ಜನರ ಒಲವಿದೆ. ಜಿಲ್ಲೆಯಲ್ಲಿ ಎಲ್ಲಾ 9 ಸ್ಥಾನಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪಿ. ನೀಲಕಂಠಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಮೇಘನಾಥ್, ಶಂಕರಪ್ಪ, ಮುಖಂಡರಾದ ಎಸ್. ದಿವಾಕರ್, ಡಿ. ರಾಘವೇಂದ್ರ, ಈ. ಮಂಜುನಾಥ್, ಅಂಬರೀಶ್, ಪಿ.ವಿ. ಶ್ರೀನಿವಾಸಲು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT