ತಾಲ್ಲೂಕಿನ ಬೆಳ್ಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದ್ದೇವೆ. ಫೆ.4ರಂದು ಯಾರೂ ಬಂದ್ಗೆ ಬೆಂಬಲ ನೀಡಬಾರದು. ಪ್ರಧಾನಿ ಬೆಂಗಳೂರಿಗೆ ಭೇಟಿ ನೀಡಿ ಅವರ ವಿಚಾರ ತಿಳಿಸಿ ಹೋಗುತ್ತಾರೆ. ಅದರಲ್ಲಿ ತಪ್ಪೇನೂ ಇಲ್ಲ. ಬಂದ್ ಆಚರಣೆಗೆ ಕಾಂಗ್ರೆಸ್ ಪಕ್ಷ, ರಾಜ್ಯ ಸರ್ಕಾರದ ವಿರೋಧವಿದೆ’ ಎಂದು ಹೇಳಿದರು.