ರೈತರು ಈಚೆಗೆ ಕಣವನ್ನು ಬಿಟ್ಟು ಒಕ್ಕಣೆ ಮಾಡುವುದಕ್ಕೆ ರಸ್ತೆಗೆ ಬರುತ್ತಿದ್ದಾರೆ. ಹೀಗಾಗಿ ಇಂಥ ರಸ್ತೆಯಲ್ಲಿ ಸಂಚರಿಸಲು ವಾಹನ ಚಾಲಕರು ಪರದಾಡುತ್ತಿದ್ದಾರೆ. ಈಚೆಗೆ ಕೆ. ಆರ್. ಪೇಟೆ ಬಳಿ ಕಾರಿಗೆ ರಾಗಿ ಹುಲ್ಲು ಸಿಕ್ಕಿ ಬೆಂಕಿ ಹತ್ತಿಕೊಂಡ ಘಟನೆಯೂ ನಡೆದಿತ್ತು. ಕಡಿಮೆ ಜಮೀನು ಹೊಂದಿದವರು, ಹಣ ಇಲ್ಲದವರು ಉತ್ತಮ ರಸ್ತೆಗಳು ಅಭಿವೃದ್ಧಿಯಾದದ್ದೇ ತಡ, ಜೀವದ ಹಂಗು ತೊರೆದು ರಸ್ತೆಯಲ್ಲೇ ಒಕ್ಕಣೆ ಮಾಡಲು ಆರಂಭಿಸಿದ್ದಾರೆ.