ರಾಯಚೂರು: ಒಣ ಕಡಲೆ ಖರೀದಿಗೆ ರಾಜ್ಯ ಸರ್ಕಾರದಿಂದಲೂ ಪ್ರೋತ್ಸಾಹಧನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಂ.ರೇವಣ್ಣ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ₹4,400 ದರ ನಿಗದಿ ಮಾಡಿದೆ. ರಾಜ್ಯ ಸರ್ಕಾರದಿಂದಲೂ ₹1 ಸಾವಿರ ಪ್ರೋತ್ಸಾಹಧನ ನೀಡಿ ಖರೀದಿಸಬೇಕು. ಖರೀದಿ ಅವಧಿಯನ್ನು ಏಪ್ರಿಲ್ವರೆಗೆ ವಿಸ್ತರಣೆ ಮಾಡಬೇಕು. ತೊಗರಿಗೂ ಆನ್ಲೈನ್ ಅರ್ಜಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಕೆರೆಗಳ ಹೂಳೆತ್ತುವ ಕಾರ್ಯವನ್ನು ಮಾರ್ಚ್ನಿಂದ ಆರಂಭಿಸಬೇಕು. ನಾರಾಯಣಪೂರ ಬಲದಂಡೆ ಕಾಲುವೆ ಆಧುನೀಕರಣ ಕೆಲಸ ಆರಂಭಿಸಬೇಕು. ಬೋಳಮಾನದೊಡ್ಡಿ ಏತ ನೀರಾವರಿ ಜಾರಿಗೊಳಿಸಬೇಕು ಒತ್ತಾಯಿಸಿದರು. ಜಿಲ್ಲಾ ಘಟಕ ಅಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ, ನರಸಪ್ಪ, ಹುಲಿಗೆಪ್ಪ ಜಾಲಿಬೆಂಚಿ ಇದ್ದರು.