‘ಕಪ್ಪು ಹಣದ ವಿರುದ್ಧ ಸಮರ ಸಾರಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ, ಅಕ್ರಮ ಆಸ್ತಿ ಹೊಂದಿರುವ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ವಿರುದ್ಧ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ‘ಆದಾಯ ತೆರಿಗೆ ಅಧಿಕಾರಿಗಳು, ಸಿದ್ಧಾರ್ಥ ಅವರ ಬಳಿ ₹ 650 ಕೋಟಿ ಅಘೋಷಿತ ಸಂಪತ್ತು ಇರುವುದನ್ನು ಪತ್ತೆ ಮಾಡಿದ್ದರು. ಈ ವಿಷಯದಲ್ಲಿ ಏಕೆ ಮೌನ ವಹಿಸಲಾಗಿದೆ’ ಎಂದು ಪ್ರಶ್ನಿಸಿದರು.