ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಣವೆಗೆ ಬೆಂಕಿ: ₹ 50 ಸಾವಿರ ಹಾನಿ

Last Updated 9 ಫೆಬ್ರುವರಿ 2018, 9:08 IST
ಅಕ್ಷರ ಗಾತ್ರ

ವಿಜಯಪುರ: ವಿದ್ಯುತ್ ತಂತಿಗಳು ಶಾರ್ಟ್ ಆಗಿರುವ ಪರಿಣಾಮ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು, ₹ 50 ಸಾವಿರಕ್ಕೂ ಹೆಚ್ಚಿನ ರಾಗಿಹುಲ್ಲು ಸುಟ್ಟುಹೋಗಿರುವ ಘಟನೆ ಪಿ.ರಂಗನಾಥಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿ.ರಂಗನಾಥಪುರ ಗ್ರಾಮದ ರೈತ ವೆಂಕಟೇಶಪ್ಪ ಎಂಬುವವರಿಗೆ ಸೇರಿದ ಹುಲ್ಲಿನ ಬಣವೆ ಸಮೀಪದ ವಿದ್ಯುತ್ ತಂತಿಗಳು ಶಾರ್ಟ್ ಆಗಿರುವುದರಿಂದ ಬೆಂಕಿ ಹೊತ್ತಿಕೊಂಡು ಖರೀದಿ ಮಾಡಿಕೊಂಡು ಬಂದಿದ್ದ ಹುಲ್ಲು ಸುಟ್ಟುಹೋಗಿದೆ.

ಸ್ಥಳೀಯರು ಟ್ಯಾಂಕರಿನಲ್ಲಿ ನೀರು ತಂದು ಬೆಂಕಿ ನಂದಿಸಲು ಯತ್ನಿಸಿದರಾದರೂ ಸಾಧ್ಯವಾಗದಿದ್ದಾಗ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಕಂದಾಯ ಇಲಾಖೆಯಿಂದ ಸೂಕ್ತ ಪರಿಹಾರವನ್ನು ಒದಗಿಸಬೇಕು ಎಂದು ಗ್ರಾಮದ ಮುಖಂಡರಾದ ಶಿವಪ್ರಕಾಶ್, ನಟರಾಜ್, ಸುಜಾತಮ್ಮ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT