ಗೇಟ್ಮನ್ ಸಮಯಪ್ರಜ್ಞೆ: ರೈಲ್ವೆ ಗೇಟ್ ಸಮೀಪದಲ್ಲೇ ಭಾರಿ ಪ್ರಮಾಣದ ನೀರು ಸೋರಿಕೆಯಾಗುತ್ತಿದ್ದುದನ್ನು ಕಂಡ ರಾತ್ರಿ ಪಾಳಿಯ ಪ್ಯಾಟ್ರೋಲ್ಮನ್ ಬಾಳಪ್ಪ ತೇವರಟ್ಟಿ ಅವರು ಚಿಕ್ಕಜಾಜೂರಿನ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಎಲ್ಲಾ ಪ್ಯಾಸೆಂಜರ್, ಎಕ್ಸ್ಪ್ರೆಸ್ ಹಾಗೂ ಗೂಡ್ಸ್ ರೈಲುಗಳು ಸೋರಿಕೆ ಸ್ಥಳದಲ್ಲಿ ಪ್ರತಿ ಗಂಟೆಗೆ 8–10 ಕಿ.ಮೀ. ವೇಗದಲ್ಲಿ ಮಾತ್ರ ಸಂಚರಿಸುವಂತೆ ಸೂಚಿಸಲಾಗಿತ್ತು. ಅಲ್ಲದೆ, ಈ ಬಗ್ಗೆ ದಾವಣಗೆರೆ, ಹುಬ್ಬಳ್ಳಿ, ಮೈಸೂರು ವಿಭಾಗದ ಅಧಿಕಾರಿಗಳಿಗೂ ಮಾಹಿತಿ ರವಾನಿಸಲಾಯಿತು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.