ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕಾಲಿಕ ಮಳೆ: ಬಾಳೆ ಬೆಳೆ ನಾಶ

Last Updated 10 ಫೆಬ್ರುವರಿ 2018, 9:03 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಶುಕ್ರವಾರ ಸಂಜೆ ಗುಡುಗು ಸಹಿತ ಜೋರಾಗಿ ಸುರಿದ ಮಳೆಯಿಂದ ಮಾಡ್ರಹಳ್ಳಿ ಗ್ರಾಮದಲ್ಲಿ ಬಾಳೆ ಬೆಳೆ ನಾಶವಾಗಿದೆ. ಗ್ರಾಮದ ನಾಗೇಂದ್ರ ಅವರ ಜಮೀನಿನಲ್ಲಿ ಬೆಳೆದಿದ್ದ ಬಾಳೆ ನೆಲಕ್ಕುರುಳಿದ್ದು, ಅಪಾರ ನಷ್ಟ ಉಂಟಾಗಿದೆ.

ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆ ಬಂಡೀಪುರ ಭಾಗದಲ್ಲಿ ಮತ್ತು ಗೋಪಾಲಸ್ವಾಮಿ ಬೆಟ್ಟದ ಪಾದದಲ್ಲಿರುವ ದೇವರಹಳ್ಳಿ, ಗೋಪಾಲಪುರ, ಬೇರಂಬಾಡಿ, ಕನ್ನೇಗಾಲ, ಚೆನ್ನಮಲ್ಲಿಪುರ, ಮದ್ದೂರು ಗ್ರಾಮಗಳಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಮಳೆಯಾಗಿದೆ.

ಹಂಗಳ ಹೋಬಳಿ ಭಾಗದಲ್ಲಿ ಮತ್ತು ಕಾಡಂಚಿನ ಗ್ರಾಮಗಳಾದ ಮಗುವಿನಹಳ್ಳಿ, ಮಂಗಲ, ಕಣಿಯನಪುರ ಗ್ರಾಮಗಳಲ್ಲಿ ಗುಡುಗು ಸಹಿತ ಸ್ವಲ್ಪಮಟ್ಟಿಗೆ ಮಳೆಯಾಗಿದೆ. ‘ಯುಗಾದಿಯ ಬಳಿಕ ಮಳೆಯಾಗಿ ದ್ದರೆ ರೈತರಿಗೆ ಅನುಕೂಲವಾಗುತ್ತಿತ್ತು. ಈ ಸಮಯದಲ್ಲಿ ಹಲವು ರೈತರು ಅರಿಸಿನವನ್ನು ಕಿತ್ತು ಬೇಯಿಸಿ ಒಣಗಿಸುವ ಹಂತದಲ್ಲಿದ್ದಾರೆ. ಅವರಿಗೆ ಮಳೆಯಿಂದ ನಷ್ಟವಾಗುತ್ತಿದೆ’ ಎಂದು ರೈತ ಮಹೇಶ್ ತಿಳಿಸಿದರು.

ಜಿಲ್ಲೆಯ ವಿವಿಧೆಡೆ ತುಂತುರು ಮಳೆ

ಜಿಲ್ಲೆಯ ವಿವಿಧೆಡೆ ದಿನವಿಡೀ ಮೋಡ ಮತ್ತು ಬಿಸಿಲಿನ ಆಟ ನಡೆದಿತ್ತು. ಸಂಜೆ ವೇಳೆ ದಟ್ಟ ಮೋಡ ಕವಿದು ಭಾರಿ ಮಳೆಯ ಸೂಚನೆ ನೀಡಿತ್ತು. ಕೊಳ್ಳೇಗಾಲದಲ್ಲಿ ಏಳು ಗಂಟೆ ಸುಮಾರಿಗೆ ಉತ್ತಮ ಮಳೆ ಸುರಿಯಿತು. ಚಾಮರಾಜನಗರ, ಯಳಂದೂರು, ಹನೂರು ಭಾಗಗಳಲ್ಲಿ ಕೆಲವು ಹನಿಗಳ ಸಿಂಚನವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT