‘ಮಠಮಂದಿರಗಳ ಪರಂಪರೆಯಿಂದ, ಮಾನವೀಯ ಗುಣಧರ್ಮದಿಂದ ಭಾರತ ವಿವಿಧತೆಯಲ್ಲಿ ಏಕತೆ ಕಂಡಿದ್ದು, ಹಿಂದೂ, ಬೌದ್ಧ, ಸಿಖ್, ಕ್ರೈಸ್ತ, ಮುಸ್ಲಿಂ... ಹೀಗೆ ಸರ್ವ ಧರ್ಮಗಳ ಜನರು ಸಮಾನವಾಗಿ ಬದುಕುವ ಅವಕಾಶ ಕಲ್ಪಿಸಿದೆ. ಆದರೆ, ಇಂದು ಸಂಬಂಧಗಳಲ್ಲಿ ಲಾಭ– ನಷ್ಟಗಳ ಲೆಕ್ಕಾಚಾರ ನಡೆಯುತ್ತಿದೆ. ಹೀಗಾಗಿ, ಮಾನವೀಯತೆ ಮೌಲ್ಯಗಳು ಮರೆಯಾಗುತ್ತಿವೆ’ ಎಂದು ವಿಷಾದ ವ್ಯಕ್ತಪಡಿಸಿದರು.