ಗವಿಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಅವರಿಗೆ ಮಠದ ಇತಿಹಾಸ, ಶಿಕ್ಷಣ ಸಂಸ್ಥೆಗಳು, ಸೇವಾ ಕಾರ್ಯಗಳ ಬಗ್ಗೆ ಮಠದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿವರಿಸಿದರು. ಗವಿಸಿದ್ದೇಶ್ವರ ಜಾತ್ರೆಯ ಛಾಯಾಚಿತ್ರಗಳ ಅಲ್ಪಂ ನೋಡಿದ ರಾಹುಲ್, ಜಾತ್ರೆಯಲ್ಲಿ ಸೇರಿದ ಜನಸ್ತೋಮದ ದೃಶ್ಯ ಕಂಡು ಅಚ್ಚರಿ ವ್ಯಕ್ತಪಡಿಸಿದರು. ಗವಿಮಠ ಶಿಕ್ಷಣ ಸಂಸ್ಥೆಯ ಮಕ್ಕಳಿಗೆ ಕೈಕುಲುಕಿ ಖುಷಿಪಟ್ಟರು.