ರಾಹುಲ್ ಬರುವಿಕೆಯನ್ನು ಸ್ವಾಗತಿಸಲು ಪಟ್ಟಣದಲ್ಲಿ ಭರ್ಜರಿ ತಯಾರಿ ನಡೆಸಲಾಗಿತ್ತು. ಕುಂಭಹೊತ್ತ ಮಹಿಳೆಯರು, ಸಾಂಪ್ರದಾಯಿ ಉಡುಗೆಯಲ್ಲಿದ್ದ ಲಂಬಾಣಿ ಮಹಿಳೆಯರು, ಮಹಿಳಾ ಡೊಳ್ಳು ಕಲಾವಿದರು, ಮೇಳದವರು ತಮ್ಮ ಕಲಾ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ, ರಾಹುಲ್ ಬಂದ ನಂತರ ನೂಕು ನುಗ್ಗಲು ಉಂಟಾಗಿದ್ದರಿಂದ ಮಹಿಳೆಯರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪರದಾಡಬೇಕಾಯಿತು. ಹಾಗಾಗಿ ರಾಹುಲ್ ಮುಂದೆ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.