‘ವಸೂಲಾಗದ ಸಾಲಗಳ (ಎನ್ಪಿಎ) ಎಲ್ಲ ಪ್ರಕರಣಗಳಿಗೆ ಸಂಬಂಧಿಸಿದಂತೆ ಉದ್ದಿಮೆಗಳನ್ನು ಪರಿಸಮಾಪ್ತಿಗೊಳಿಸುವುದೇ ಪರಿಹಾರ ಆಗಲಾರದು. ಅನೇಕ ಸಂದರ್ಭಗಳಲ್ಲಿ ಉದ್ದಿಮೆ ವಹಿವಾಟು ವೈಫಲ್ಯಗೊಂಡಿರುತ್ತದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ಅಗತ್ಯ ಇದೆ. ಹಣಕಾಸು ಸಂಕಷ್ಟ ಎದುರಿಸುತ್ತಿರುವ ಬ್ಯಾಂಕ್ಗಳಿಗೆ ಅಗತ್ಯವಾಗಿರುವ ಬಂಡವಾಳದ ನೆರವು ನೀಡಲು ಸರ್ಕಾರ ಸಿದ್ಧ ಇದೆ’ ಎಂದರು.