ಮುಖ್ಯವಾಗಿ ಜನನ, ಮರಣ ಪ್ರಮಾಣಪತ್ರ, ಮಹಿಳೆಯರ ಹಕ್ಕು, ಗ್ರಾಹಕರ ಕಾಯ್ದೆಗಳ ಬಗ್ಗೆ ಹೆಚ್ಚಿನ ಅರಿವು ಪಡೆದುಕೊಳ್ಳಬೇಕು. ಈಗಮಹಿಳೆಯರು ಹಾಗೂ ಮಕ್ಕಳು ಕಾನೂನು ತಿಳಿದುಕೊಳ್ಳಬೇಕಾದ ಅಗತ್ಯ ಹೆಚ್ಚಿದೆ ಎಂದು ಹೇಳಿದರು. ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಮಾತನಾಡಿ, ‘ಮಹಿಳಾ ಹಕ್ಕುಗಳ ಬಗ್ಗೆ ಎಲ್ಲರಿಗೂ ತಿಳಿದಿರಬೇಕು. ಸಮಾಜದಲ್ಲಿಮಹಿಳೆಯರನ್ನು ಶೋಷಣೆಗೆ ಗುರಿಪಡಿಸಲಾಗುತ್ತಿದೆ. ಆದ್ದರಿಂದ ಮಹಿಳೆಯರು ಮತ್ತು ಮಕ್ಕಳು ಶಿಕ್ಷಣಕ್ಕೆ ಒತ್ತು ನೀಡಬೇಕು‘ ಎಂದರು.