ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ವೃತ್ತಿ ಶಿಕ್ಷಣ, ಕಾನೂನು, ಮ್ಯಾನೇಜ್ಮೆಂಟ್ ಕೋರ್ಸ್ಗಳಿಗೆ 2018-19ನೇ ಶೈಕ್ಷಣಿಕ ಅವಧಿಗೆ ಪ್ರವೇಶ ಪಡೆದಿರುವ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ ದಾವಣಗೆರೆ ಜಿಲ್ಲೆಯ ಪತ್ರಕರ್ತರ ಮಕ್ಕಳೂ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಯಾ ಶಾಲಾ ಕಾಲೇಜಿನ ಮುಖ್ಯಸ್ಥರ ಮೂಲಕ ಕ್ರಮಬದ್ಧ ಪ್ರಮಾಣ
ಪತ್ರಗಳೊಂದಿಗೆ ಆಗಸ್ಟ್ 31ರ ಒಳಗೆ ಅರ್ಜಿ ಸಲ್ಲಿಸಬಹುದು.