ಬಜೆಟ್ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಎಲೆವೆಟೆಡ್ ಕಾರಿಡಾರ್ ಅಭಿವೃದ್ಧಿಗೆ ಸಾವಿರಾರು ಕೋಟಿ, ಹಾಸನದ ವರ್ತುಲ ರಸ್ತೆಗೆ ₹ 300 ಕೋಟಿ ಕೊಡುವ ಕುಮಾರಸ್ವಾಮಿ ಅವರು ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ರಸ್ತೆ ಅಭಿವೃದ್ಧಿ ಹಾಗೂ ಕಿಮ್ಸ್ ಆಸ್ಪತ್ರೆ ಅಭಿವೃದ್ಧಿಗೆ ಗಮನ ಹರಿಸಿಲ್ಲ ಎಂದರು.