‘ಕೆಲ ತಿಂಗಳ ಹಿಂದೆ ಮಠದ ಆವರಣದಲ್ಲಿ ನವಜಾತ ಶಿಶು ಪತ್ತೆಯಾಗಿತ್ತು. ಮೂರು ದಿನಗಳ ಶಿಶುವನ್ನು ಪೋಷಕರು ಯಾವ ಕಾರಣಕ್ಕಾಗಿ ತೊರೆದಿದ್ದಾರೆ ಎಂಬುದು ಗೊತ್ತಿಲ್ಲ. ಶಿಶುವನ್ನು ಮಠವೇ ಪ್ರೀತಿಯಿಂದ ಆರೈಕೆ ಮಾಡುತ್ತಿದೆ’ ಎಂದು ಹೇಳಿದರು. ಅರಸೀಕೆರೆ ತಾಲ್ಲೂಕು ದೊಡ್ಡಮೇಟಿಕುರ್ಕೆಯ ಬೂದಾಳು ವಿರಕ್ತಮಠದ ಶಶಿಶೇಖರ ಸಿದ್ಧಬಸವ ಸ್ವಾಮೀಜಿ ಮಾತನಾಡಿ, ‘ವಾರ, ತಿಥಿ, ನಕ್ಷತ್ರ ನೋಡದೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವುದನ್ನು ಕಂಡು ಖುಷಿಯಾಗುತ್ತಿದೆ. ವಚನಗಳನ್ನು ಹೇಳುತ್ತ, ಶರಣರ ತತ್ವಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಚಂಚಲ ಮನಸಿನಿಂದ ಕೌಟುಂಬಿಕ ಬದುಕು ಹಾಳಾಗುತ್ತದೆ. ಇದಕ್ಕೆ ಅವಕಾಶ ಮಾಡಿಕೊಡಬಾರದು’ ಎಂದು ನವ ವಧು–ವರರಿಗೆ ಕಿವಿಮಾತು ಹೇಳಿದರು.