ಮೈಸೂರು,ಮಂಡ್ಯ, ಹಾಸನ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಬೇಸಿಗೆ ಬೆಳೆಯಾಗಿ ಭತ್ತ ಬೆಳೆಯಲಾಗಿದೆ. ಆದರೆ ಮಾರುಕಟ್ಟೆ ದರ ಕ್ವಿಂಟಲ್ಗೆ ₹ 1200 ಕ್ಕೆ ಕುಸಿದಿರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ದರ ಕುಸಿತ ತಪ್ಪಿಸಿ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಪ್ರತಿ ಕ್ವಿಂಟಲ್ ಗೆ ₹ 1550 ದರದಲ್ಲಿ ಭತ್ತ ಖರೀದಿಸಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಜಿಲ್ಲೆಯಲ್ಲಿ ಅಗತ್ಯಕ್ಕೆ ಅನುಗುಣವಾಗಿ ಖರೀದಿ ಕೇಂದ್ರ ತೆರೆಯುವಂತೆ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧಿಕಾರಿಗಳಿಗೆ ತಿಳಿಸಿದರು.