ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಯೋಧನಮನ ಕಾರ್ಯಕ್ರಮ ನಾಳೆ

Last Updated 6 ಜುಲೈ 2018, 14:14 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಯೋಧಾಭಿಮಾನಿ ಬಳಗದ ಆಶ್ರಯದಲ್ಲಿ ಇಲ್ಲಿನ ಕೊಡವ ಸಮಾಜ ಸಹಯೋಗದಲ್ಲಿ ‘ಯಾರಿಗಾಗಿ ನಮ್ಮವರ ಬಲಿದಾನ’ ಯೋಧನಮನ ಕಾರ್ಯಕ್ರಮ ಜುಲೈ 8ರಂದು ನಗರದ ಕೊಡವ ಸಮಾಜ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷ ಕಂಡ್ರತಂಡ ಸಿ. ಸುಬ್ಬಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಕುಪ್ಪಂಡ ಪಿ.ನಂಜಪ್ಪ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ, ಸಾಮಾಜಿಕ ಚಿಂತಕ ಅರ್ಜುನ್ ದೇವಾಲದಕೆರೆ ಪಾಲ್ಗೊಳ್ಳಲಿದ್ದಾರೆ.

ದೇಶರಕ್ಷಣೆಯಲ್ಲಿ ತೊಡಗಿದ್ದಾಗ ಬಲಿದಾನಿ ಮಾಡಿದ, ಯುದ್ಧ ಮತ್ತು ಇತರೆ ಹೋರಾಟದಲ್ಲಿ ಪ್ರಾಣ ಪಣಕ್ಕಿಟ್ಟು ಹೋರಾಡಿದ ವೀರ ಸೈನಿಕರನ್ನು ಸ್ಮರಿಸುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT