ಕುಟುಂಬ ಪ್ರೀತಿಯಿಂದ ವಂಚಿತರಾದವರೇ ಹೆಚ್ಚಾಗಿಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಹಿರಿಯರ ಮಾರ್ಗದರ್ಶನ ದೊರೆತರೆ ಮಕ್ಕಳು ಪರಿಪೂರ್ಣ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ. ಇಲ್ಲದಿದ್ದರೆ ಸಮಾಜ ವಿರೋಧಿ ಶಕ್ತಿಗಳ ಜತೆ ಸೇರುವ ಸಾಧ್ಯತೆ ಇರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಎನ್.ಅಶೋಕ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ‘ವಿಶ್ವದ ಶಾಂತಿ, ನೆಮ್ಮದಿಗೆ ಮಾದಕದ್ರವ್ಯಗಳ ತಡೆ ಅಗತ್ಯವಾಗಿದೆ. ನಮ್ಮ ದೇಶದಲ್ಲಿ ಪ್ರತಿವರ್ಷ ಸುಮಾರು8 ಕೋಟಿ ಜನರು ಈ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಇದರಲ್ಲಿ 6 ಕೋಟಿ ಜನ ಮದ್ಯವ್ಯಸನಿಗಳಾಗಿದ್ದಾರೆ.42 ಲಕ್ಷ ಜನ ಗಾಂಜಾ ಸೇವನೆಯ ಚಟಅಂಟಿಸಿಕೊಂಡಿದ್ದಾರೆ. ಇದನ್ನು ತಡೆಯುವ ನಿಟ್ಟನಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡುವ ಅಗತ್ಯವಿದೆ’ ಎಂದು ಅವರು ಹೇಳಿದರು.