ಇದರ ಮಧ್ಯೆ ಹಿರಿಯ ನಾಗರಿಕರಿಗೆ ಹೆಚ್ಚಿನ ಸೌಲಭ್ಯಗಳನ್ನು ಕೊಡುವ ದಿಟ್ಟಿನಲ್ಲಿ ಸರ್ಕಾರ ಮೌನ ವಹಿಸಿದೆ. ಚುನಾವಣಾಪೂರ್ವ ಹೋಮ, ಹವನಗಳ ಪರಿಣಾಮವೋ ಎಂಬಂತೆ ಬ್ರಾಹ್ಮಣ ಸಮುದಾಯಕ್ಕೆ ಅನುದಾನ ಘೋಷಿಸಿರುವುದು ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಗಿದೆ. ಸರ್ಕಾರದ ಅನವಶ್ಯಕ ಖರ್ಚನ್ನು ಕಮ್ಮಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಯೋಜನೆಯನ್ನು ಹಮ್ಮಿಕೊಂಡು, ಅದನ್ನು ಕಾರ್ಯರೂಪಕ್ಕೆ ತಂದರೆ ಜನರಿಗೆ ಸರ್ಕಾರದ ಕಾರ್ಯವೈಖರಿ ಬಗ್ಗೆ ಸ್ವಲ್ಪವಾದರೂ ನಂಬಿಕೆ ಬರುತ್ತದೆ.