2016ರಲ್ಲಿ ಝಾಕೀರ್ ನಾಯ್ಕ್ ಭಾರತ ತೊರೆದು ಮಲೇಷ್ಯಾದಲ್ಲಿ ನೆಲೆಸಿದ್ದಾರೆ. ಮಲೇಷ್ಯಾದಲ್ಲಿ ಅವರಿಗೆ ಶಾಶ್ವತವಾಗಿ ವಾಸಿಸಲು ಅವಕಾಶ ಕಲ್ಪಿಸಲಾಗಿದೆ. ಭಯೋತ್ಪಾದನೆ ಸಂಬಂಧಿಸಿದ ಚಟುವಟಿಕೆಗಳಿಗೆ ಕುಮ್ಮಕ್ಕು ಮತ್ತು ದ್ವೇಷ ಭಾಷಣ ಮಾಡಿದ ಆರೋಪವನ್ನು ಝಾಕೀರ್ ಎದುರಿಸುತ್ತಿದ್ದಾರೆ. ಆದರೆ, ಈ ಆರೋಪಗಳನ್ನು ಝಾಕೀರ್ ತಳ್ಳಿಹಾಕಿದ್ದಾರೆ.