ಜೆಡಿಎಸ್ನ ಎಸ್.ಎಲ್. ಭೋಜೇಗೌಡ, ‘ಐಎಎಸ್ ಅಧಿಕಾರಿಗಳಿಗೆ ಪ್ರಾಯೋಗಿಕ ಜ್ಞಾನ ಇಲ್ಲ. ಯಾವುದೇ ಚರ್ಚೆ ನಡೆಸದೆ ಈ ಸುತ್ತೋಲೆ ಹೊರಡಿಸಲಾಗಿದೆ. ಶಿಕ್ಷಕರನ್ನೇ ನೇಮಿಸದೆ ಉತ್ತಮ ಫಲಿತಾಂಶ ಪಡೆಯಬೇಕು ಎಂದು ಹೇಳುವುದು ಯಾವ ನ್ಯಾಯ’ ಎಂದು ಪ್ರಶ್ನಿಸಿದರು. ಸುತ್ತೋಲೆ ವಾಪಸ್ ಪಡೆಯಬೇಕು ಎಂದು ಕಾಂಗ್ರೆಸ್ನ ಶರಣಪ್ಪ ಮಟ್ಟೂರ, ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಆಗ್ರಹಿಸಿದರು.