ಕಾಗದ ಪತ್ರಗಳನ್ನು ಮಂಡಿಸಬೇಕಿದ್ದ ಮೂವರು ಸಚಿವರು ಗೈರು ಹಾಜರಾಗಿದ್ದರು. ಅವರ ಪರವಾಗಿ ಕಾನೂನು ಸಚಿವ ಕೃಷ್ಣ ಬೈರೇಗೌಡ ಆ ಹೊಣೆಯನ್ನು ನಿಭಾಯಿಸಿದರು. ಆಗ ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕಾದ ಸದಸ್ಯರ ಪಟ್ಟಿ ನೋಡಿದ ಸಭಾಧ್ಯಕ್ಷರು, ‘ಸಚಿವರಾದ ಜಿ.ಟಿ.ದೇವೇಗೌಡ, ಡಿ.ಸಿ.ತಮ್ಮಣ್ಣ ಹಾಗೂ ಯು.ಟಿ.ಖಾದರ್ ಎಲ್ಲಿ’ ಎಂದು ಪ್ರಶ್ನಿಸಿದರು.