ರಾಮನಗರದಲ್ಲಿ ಹೊಸ ಕಾಲೇಜು ಪ್ರಾರಂಭಿಸುವ ಕುರಿತು ಶುಕ್ರವಾರ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ‘ಸುಸಜ್ಜಿತ ಕಟ್ಟಡ, ಶೌಚಾಲಯ, ನುರಿತ ಉಪನ್ಯಾಸಕರು ಸೇರಿದಂತೆ ಎಲ್ಲ ಅಗತ್ಯ ಸೌಕರ್ಯಗಳಿದ್ದಾಗ ಮಾತ್ರ ಸರ್ಕಾರಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಬಹುದು. ಹೀಗಾಗಿ, ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಿ’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.